Connect with us

DAKSHINA KANNADA

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು..!

ಮಂಗಳೂರು, ಜುಲೈ 31: ಮೆಡಿಕಲ್‌ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು  ಮಂಗಳೂರಿನಲ್ಲಿ ನಡೆದಿದೆ.

ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್‌ (21) ಮೃತಪಟ್ಟವರು.

ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್‌ ತೆಗೆದುಕೊಂಡು ಬರಲು ಸಮಯ್‌ ಅವರು ಬಾತ್‌ರೂಂಗೆ ಹೋಗಿ ಬರು ವೇಳೆ ತಾಯಿ ನೆಲ ಮಹಡಿಗೆ ತಲುಪಿದ್ದರು.

ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಗೆ ಬಂದು ಕಾರು ತೊಳೆಯಲು ಬಕೆಟ್‌ ಕೊಂಡು ಹೋಗಿದ್ದೀರಾ ಎಂದು ತಾಯಿ ಜೊತೆ ಕೇಳಲು ಬಗ್ಗಿದರು. ಈ ವೇಳೆ ಸಮಯ್‌ ಮಳೆ ನೀರಿನ ಹನಿಯಿಂದ ಜಾರಿ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಸಮಯ್‌ ತಂದೆ ಸಿವಿಲ್‌ ಎಂಜಿನಿಯರ್‌ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್‌ ಹಿರಿಯವರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *