DAKSHINA KANNADA
ಮಂಗಳೂರು: ಎಮ್ಮೆಕೆರೆಯಲ್ಲಿ ಈಜಾಡಿದ ಸಚಿವ ಗುಂಡೂರಾವ್
ಮಂಗಳೂರು, ಜುಲೈ 06: ನಗರದ ಎಮ್ಮೆಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಈಜಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಮಂಗಳೂರಿನ ಎಮ್ಮೆಕೆರೆ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣ ವಾಗಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಬೆಳ್ಳಂ ಬೆಳಗ್ಗೆ ಈಜಾಡಿ ಕಸರತ್ತು ಮಾಡಿದ್ದಾರೆ.
You must be logged in to post a comment Login