LATEST NEWS
ಮಂಗಳೂರು – ಕುಡಿದ ಮತ್ತಿನಲ್ಲಿ ಹೆಂಡತಿಯನ್ನ ಕೊಂದ ಗಂಡ

ಮಂಗಳೂರು ನವೆಂಬರ್ 28: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ.
ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.

ನವೆಂಬರ್ 27 ರಂದು ಭಾನುವಾರ ರಾತ್ರಿ ಪತಿ -ಪತ್ನಿ ನಡುವೆ ಜಗಳವಾಗಿದ್ದು, ಈ ವೇಳೆ ಪತ್ನಿ ಸರಿತಾಳ ಮೇಲೆ ದುರ್ಗೇಶ್ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು, ಇದೆಲ್ಲವನ್ನು ಕಂಡು ದಂಪತಿಯ ಹನ್ನೊಂದು ವರ್ಷದ ಮಗ ಹೆದರಿ ಓಡಿಹೋಗಿದ್ದಾನೆ. ಇತ್ತ ತೀವ್ರ ರಕ್ತಸ್ರಾವವಾಗಿ ಸರಿತಾ ಸಾವನ್ನಪ್ಪಿದ್ದಾರೆ. ಬಜ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.