Connect with us

LATEST NEWS

ಮಂಗಳೂರಿನ ನವಭಾರತ್ ಸರ್ಕಲ್ ನೆಲಸಮ..!!

ಮಂಗಳೂರು ಜೂನ್ 12 : ಮಂಗಳೂರಿನ ನವಭಾರತ್ ಸರ್ಕಲ್ ನ್ನು ನಿನ್ನೆ ರಾತ್ರಿ ನೆಲಸಮ ಮಾಡಲಾಗಿದ್ದು, ಅದೇ ಜಾಗದಲ್ಲಿ ಹೊಸದಾಗಿ ಸರ್ಕಲ್ ನಿರ್ಮಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.


ಮಂಗಳೂರಿನ ಹೃದಯಭಾಗದಲ್ಲಿರುವ ನವಭಾರತ್ ಸರ್ಕಲ್( ರಾಷ್ಟ್ರಕವಿ ಗೋವಿಂದ್ ಪೈ ವೃತ್ತ) ವನ್ನು ನಿನ್ನೆ ರಾತ್ರಿ ಸಂದರ್ಭ ನೆಲಸಮ ಮಾಡಲಾಗಿದೆ. ಈ ಸರ್ಕಲ್ ಇತ್ತೀಚೆಗೆ ಬರೀ ರಾಜಕೀಯ ಪಕ್ಷಗಳ ಪೋಸ್ಟರ್ ಮತ್ತು ಬ್ಯಾನರ್ ಗಳನ್ನು ಮಾತ್ರ ಅಂಟಿಸಲು ಬಳಸಲಾಗುತ್ತಿತ್ತು.


ಇನ್ನು ಈ ಕುರಿತಂತೆ ಮಾಹಿತಿ ನೀಡಿರುವ ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಸದ್ಯ ಇರುವ ವೃತ್ತ ಅವೈಜ್ಞಾನಿಕವಾಗಿ ನಿರ್ಮಿಸಲ್ಪಟ್ಟಿದ್ದು, ಸಂಚಾರ ಸುಗಮವಾಗಿ ಸಾಗಲು ಅನಾನುಕೂಲತೆಯನ್ನು ಉಂಟುಮಾಡುತ್ತಿದೆ. ಆದ್ದರಿಂದ ವೃತ್ತವನ್ನು ನೆಲಸಮ ಮಾಡಲಾಗಿದೆ. ಶೀಘ್ರದಲ್ಲೇ ಇಲ್ಲಿ ವೈಜ್ಞಾನಿಕ ವಲಯವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ವೃತ್ತದ ಹೆಸರಿನಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದ ಪಾಲಿಕೆ ತನ್ನದೇ ಆದೇಶವನ್ನು ಉಲ್ಲಂಘಿಸಿ ಮಳೆಗಾಲದಲ್ಲೇ ಕಾಮಗಾರಿ ನಡೆಸಲು ಮುಂದಾಗಿದೆ.

https://youtu.be/uajq4314ND4

Share Information
Continue Reading
Advertisement
Click to comment

Leave a Reply

Your email address will not be published. Required fields are marked *