LATEST NEWS
ಮಂಗಳೂರು – ನವರಾತ್ರಿ ಸಂದರ್ಭದಲ್ಲೇ ದಸರಾರಜೆಗೆ ಶಿಕ್ಷಣ ಸಚಿವರ ಸೂಚನೆ

ಮಂಗಳೂರು ಸೆಪ್ಟೆಂಬರ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಸಂದರ್ಭದಲ್ಲೇ ಶಾಲೆ ಕಾಲೇಜುಗಳಿಗೆ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರ ಮನವಿಗೆ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರು ಸ್ಪಂಧಿಸಿದ್ದು, ದ.ಕ. ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೆ. 26ರಿಂದ ಅ.10ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸಹಿತ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲೇ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿದ್ದರು. ಇದಕ್ಕೆ ಸಚಿವರು ಸ್ಪಂದಿಸಿದ್ದು. ಅಕ್ಟೋಬರ್ 2ರ ಗಾಂಧಿ ಜಯಂತಿಯ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
