Connect with us

LATEST NEWS

ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎತ್ತಂಗಡಿ

ಮಂಗಳೂರು, ಮೇ 29 : ಸರಣಿ ಹತ್ಯೆಗಳ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಇದರ ಜೊತೆಗೆ ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಯತೀಶ್ ಅವರನ್ನೂ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ನಿರೀಕ್ಷೆಯಂತೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಈ ಹಿಂದೆ ದಕ್ಷಿಣಕನ್ನಡದ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.


ಅನುಪಮ್ ಅಗರ್ವಾಲ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಎಸ್ಪಿ ಯತೀಶ್ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಜಾಗ ತೋರಿಸಿಲ್ಲ.

ದಕ್ಷಿಣ ಕನ್ನಡ ಎಸ್ಪಿ ಜಾಗಕ್ಕೆ ಉಡುಪಿಯಲ್ಲಿ ಎಸ್ಪಿಯಾಗಿ ದಕ್ಷ ಅಧಿಕಾರಿಯೆಂದು ಹೆಸರು ಮಾಡಿರುವ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಎಸ್ಪಿ ಹುದ್ದೆಗೆ ಮಂಗಳೂರಿನಲ್ಲಿ ಈ ಹಿಂದೆ ಡಿಸಿಪಿಯಾಗಿ ದಕ್ಷತೆಯಿಂದ ಕೆಲಸ ಮಾಡಿದ್ದ ಹರಿರಾಮ್ ಶಂಕರ್ ಅವರನ್ನು ನೇಮಿಸಲಾಗಿದೆ. ಹರಿರಾಮ್ ಶಂಕ‌ರ್ ಬೆಂಗಳೂರಿನಲ್ಲಿ ಇಂಟೆಲಿಜೆನ್ಸ್ ವಿಭಾಗದಲ್ಲಿ ಎಸ್ಪಿ ಆಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *