Connect with us

LATEST NEWS

ಕ್ರಿಮಿನಲ್ ಗಳಿಗೆ ಮನೆಯಲ್ಲಿ ಆಶ್ರಯ ಕೊಡುವುದು ಕ್ರಿಮಿನಲ್ ಅಪರಾಧ – ಪೊಲೀಸ್ ಕಮಿಷನರ್ ಖಡಕ್ ವಾರ್ನಿಂಗ್

ಮಂಗಳೂರು ಮೇ 31: ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರಿವಹಿಸಿಕೊಂಡ ಬೆನ್ನಲ್ಲೇ ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೊಲೆ ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಮಂಗಳೂರು ‌ಕಮಿಷನರ್ ಖಡಕ್ ವಾರ್ನಿಂಗ್ ಕೊಡುವ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.,


ಈ ಬಗ್ಗೆ ಮಾಹಿತಿ ನೀಡಿರುವ ಸುಧೀರ್ ಕುಮಾರ್ ರೆಡ್ಡಿ ಎಲ್ಲಾ ಆರೋಪಿಗಳಿಗೆ ಮತ್ತು ಆರೋಪಿಗಳಿಗೆ ಸಹಕಾರ ಮಾಡುವ ಎಲ್ಲರಿಗೂ ಇದು ಎಚ್ಚರಿಕೆ, ಎಲ್ಲಾ ದೊಡ್ಡವರಿಗೆ, ಆರೋಪಿಗಳ ಮನೆಯಲ್ಲಿರುವವರು, ಗೆಳೆಯರು, ಸಂಬಂಧಿಕರಿಗೆ, ಸಮಾಜದಲ್ಲಿ ಚೆನ್ನಾಗಿದ್ದು ಆರೋಪಿಗಳಿಗೆ ಸಹಾಯ ಮಾಡುವವರಿಗೆ ಕಾನೂನಿನ ಬಗ್ಗೆ ಚಿಕ್ಕ ಮಾಹಿತಿ ಮತ್ತು ಕಾನೂನಿನ ಬಗ್ಗೆ ತಿಳುವಳಿಕೆ ನೀಡುತ್ತಾ ಇದ್ದವೆ.

ಯಾವುದೇ ಅಪರಾಧ ಮಾಡಿದ ಯಾವನೇ ಆರೋಪಿ ನಿಮ್ಮ ಮನೆಯಲ್ಲಿದ್ರೂ, ಅವರಿಗೆ ಆಶ್ರಯ, ಕಾರು, ದುಡ್ಡು, ಫೋನ್ ಕೊಡೋದು ಅಪರಾಧ, ಯಾವ ಊರಲ್ಲಿ ಏನ್ ಹೇಳ್ತಾರೋ ಗೊತ್ತಿಲ್ಲ, ಆದರೆ ನಾವು ಮಾತ್ರ ಅವನನ್ನ ಆರೋಪಿ ಅಂತಾನೆ ಹೇಳ್ತೀವಿ. ನಮ್ಮ ಬಿಎನ್ ಎಸ್ ಅಡಿಯಲ್ಲಿ ಅದು ಕೂಡ ಒಂದು ಅಪರಾಧವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *