ಮಂಗಳೂರು, ಅಕ್ಟೋಬರ್ 28 : ನಿನ್ನೆ ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದರು.
ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್ ಸಾವನ್ನಪ್ಪಿದ ದುರ್ದೈವಿಗಳು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಆಕ್ರೋಶ ವ್ಯಕತವಾಗಿದ್ದು , ಇದೀಗ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆಯಲ್ಲಿ ನಿನ್ನೆ ನಡೆದ ಅಫಘಾತದಲ್ಲಿ ನವದಂಪತಿಗಳು ಸಾವನ್ನಪ್ಪಿದ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.