Connect with us

    DAKSHINA KANNADA

    ಮಂಗಳೂರು: ಮಳೆಗೆ ಧರೆಗುರುಳಿದ ಮರ-ಎರಡು ವಾಹನಗಳಿಗೆ ಹಾನಿ

    ಮಂಗಳೂರು, ಮೇ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದು ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾಗಿದೆ.

    ಮಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕರಂಗಲ್ಪಾಡಿಯ ಕೋರ್ಟ್‌ ರಸ್ತೆಯ ಬಳಿ ಮರದ ಕೊಂಬೆ ತುಂಡಾಗಿ, ಕಾರುಗಳ ಮೇಲೆ ಬಿದ್ದಿದೆ. ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ.

    ಮರದ ಕೊಂಬೆಯಡಿ ಸಿಲುಕಿ ವಿದ್ಯುತ್ ತಂತಿಗಳೂ ತುಂಡಾಗಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಉರುಳಿ ಬಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು.

    ಈ ಘಟನೆ ನಡೆದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಎರಡು ಕಾರುಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Share Information
    Advertisement
    Click to comment

    You must be logged in to post a comment Login

    Leave a Reply