Connect with us

LATEST NEWS

 ಮಂಗಳೂರು :  ಸಾಫ್ಟ್ ವೇರ್ ಕಂಪನಿ ಕ್ಯಾಬ್ ಚಾಲಕರ ಹೊಡೆದಾಟ, ಒಬ್ಬನಿಗೆ ಚೂರಿ ಇರಿತ..!

ಮಂಗಳೂರು : ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿ ಕ್ಯಾಬ್ ಚಾಲಕರು ಪರಸ್ಪರ ಹೊಡೆದಾಡಿಕೊಂಡಿದ್ದು ಒರ್ವ ಚೂರಿ ಇರಿತಕ್ಕೆ ಒಳಗಾಗಿದ್ದಾನೆ.  ಚೂರಿಯಿಂದ ಹಲ್ಲೆಯಾಗಿದ್ದವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಕೊಲೆಯತ್ನ ಪ್ರಕರಣ ದಾಖಲಾಗಿದೆ.

ನಗರದ ದಿಯಾ ಸಿಸ್ಟಮ್ಸ್  ಸಾಫ್ಟ್ ವೇರ್ ಕಂಪೆನಿಯಲ್ಲಿ  ಕ್ಯಾಬ್ ಚಾಲಕರು ಇವರಾಗಿದ್ದು, ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.

ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ  ಹೊಡೆದಾಟ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *