Connect with us

    LATEST NEWS

    ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನದ ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಯುವಕರಿಗೆ ಚೂರಿ ಇರಿತ

    ಮಂಗಳೂರು ಜೂನ್ 10:ಪ್ರಧಾನಿ ನರೇಂದ್ರ ಮೋದಿ ನಿನ್ನೆ ಪ್ರಮಾಣವಚನದ ವಿಜಯೋತ್ಸವದ ವೇಳೆ ಇಬ್ಬರ ಗುಪೊಂದು ಚಾಕುವಿನಿಂದ ಇರಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ಇಂದು ತಡರಾತ್ರಿ ವೇಳೆ ಸಂಭವಿಸಿದೆ.


    ಹರೀಶ್(41), ನಂದಕುಮಾರ್(24)ಗೆ ಚಾಕು ಇರಿಯಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೋರ್ವ ಕೃಷ್ಣ ಕುಮಾರ್ ಎಂಬಾತನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದೆ. ಈ ಘಟನೆ ಸಂಬಂಧ ಕೊಣಾಜೆಯಲ್ಲಿ ಪ್ರಕರಣ ದಾಖಲಾಗಿದೆ.


    ನಿನ್ನೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಸುರೇಶ್, ನಂದ ಕುಮಾರ್​ ಹಾಗೂ ಕೃಷ್ಣ ಕುಮಾರ್ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಈ ಗಲಾಟೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಹಲವರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply