Connect with us

    DAKSHINA KANNADA

    ಮಂಗಳೂರಿನಲ್ಲಿ ಕರೆಂಟ್ ಶಾಕ್‌ಗೆ ಇಬ್ಬರು ಆಟೋ ಚಾಲಕರು ಬಲಿ..

    ಮಂಗಳೂರು, ಜೂನ್ 27:ಕರೆಂಟ್ ಶಾಕ್‌ ಗೆ ಇಬ್ಬರು ಅಮಾಯಕರು ಬಲಿಯಾದ ದಾರುಣ ಘಟನೆ ನಗರದ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಇಂದು ಮುಂಜಾನೆ ನಡೆದಿದೆ.

    ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು ಗುರುತಿಸಲಾಗಿದೆ. ಇಬ್ಬರೂ ಕೂಡ ಇಲ್ಲಿನ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಮುಂಜಾನೆ 5 ರ ಸುಮಾರಿಗೆ ಒಬ್ಬ ಆಟೋ ಚಾಲಕ ಆಟೋ ಸ್ವಚ್ಚ ಗೊಳಿಸಲು ರೂಂ ನಿಂದ ಹೊರಬಂದು ಆಟೋ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ಬೀದಿ ದೀಪದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು.

    ಇದನ್ನು ಕಂಡ ಮತ್ತೊರ್ವ ಚಾಲಕ ಗೋಣಿ ಚೀಲ ಹಿಡಿದು ಆತನ ರಕ್ಷಣೆಗೆ ಮುಂದಾಗಿದ್ದಾರೆ,ಈ ಸಂದರ್ಭ ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply