Connect with us

LATEST NEWS

ಸ್ಕಾರ್ಪ್,ಕೇಸರಿ ಶಾಲು ವಿವಾದ – ಮಂಗಳೂರು ವಿವಿಯಿಂದ ಸಮವಸ್ತ್ರ ನೀತಿ ರೂಪಿಸಲು ನಿರ್ಧಾರ

ಮಂಗಳೂರು ಜನವರಿ 07: ಮಂಗಳೂರು ಸಮವಸ್ತ್ರ ವಿಚಾರದಲ್ಲಿ ಕರಾವಳಿ ಕಾಲೇಜುಗಳಲ್ಲಿ ಕಳೆದು ಕೆಲವು ದಿನಗಳಿಂದ ನಡೆಯುತ್ತಿರುವ ವಿವಾದ ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.


ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿವಾದಗಳಿಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಇಂತಹ ಭಾವನಾತ್ಮಕ ವಿಚಾರಗಳಿಂದ ಕಾಲೇಜುಗಳಲ್ಲಿ ಕಲಿಕಾ ವಾತಾವರಣ ಕೆಡದಂತೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಸಿಂಡಿಕೇಟ್ ಸದಸ್ಯರು, ನಗರದ ಕೆಲ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಸಲಹೆ ಸೂಚನೆಗಳನ್ನು ಆದರಿಸಿ ಕೆಲವೊಂದು ಮಾರ್ಗಸೂಚಿಗಳನ್ನು ರಚಿಸಿ ಅದನ್ನು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಲಾ ಕಾಲೇಜುಗಳಿಗೆ ಕಳುಹಿಸಲಾಗುವುದು ಎಂದರು.


ಕಾಲೇಜು ಆಡಳಿತ ಮಂಡಳಿ ಇಂತಹ ಸಮಸ್ಯೆಗಳು ಎದುರಾದಾಗ ಅದು ಹೆಮ್ಮರವಾಗದಂತೆ ಎಚ್ಚರಿಕೆ ವಹಿಸಬೇಕು. ಆ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆಯನ್ನು ಕಳುಹಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎಲ್ಲಾ ಕಡೆ ಜಾರಿಗೊಳಿಸಲು ಮಂಗಳೂರು ವಿಶ್ವವಿದ್ಯಾನಿಲಯ ಬದ್ಧವಾಗಿದೆ ಎಂದು ಅವರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *