Connect with us

    LATEST NEWS

    ಮಂಗಳೂರಿನ ಬಿಜೈ ರಸ್ತೆ ಸಮೀಪದ ಗೊಡೆಯೊಂದರಲ್ಲಿ ಉಗ್ರರ ಪರ ಜಿಂದಾಬಾದ್ ಬರಹ..!

    ಮಂಗಳೂರು : ಮಂಗಳೂರಿನ ಬಿಜೈ ರಸ್ತೆಯ ಗೋಡೆಯೊಂದರಲ್ಲಿ ಉಗ್ರರ ಪರ ಲಷ್ಕರ್ ಜಿಂದಾಬಾದ್ ಎಂದು ಬರೆದ ಘಟನೆ ನಡೆದಿದೆ.


    ಮಂಗಳೂರಿನ ನಗರದ ಬಿಜೈ ಸಮೀಪದ ರಸ್ತೆಯ ಗೊಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ ನಮ್ಮನ್ನ ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ ಎಂದು ಬರೆಯಲಾಗಿದ್ದು, ಜೊತೆಗೆ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿದೆ.

    ಮಂಗಳೂರಿನ ಸರ್ಕ್ಯೂಟ್‌‌ ಹೌಸ್‌‌ನ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌‌ ಒಂದರ ಕೌಂಪೌಂಡ್‌ನ ಮೇಲೆ ಹ್ಯಾಷ್ ಟ್ಯಾಗ್ ಹಾಕಿ, “ಲಷ್ಕರ್‌‌ ಜಿಂದಾಬಾದ್”‌‌‌‌‌ ಎಂದು ಬರೆದಿದ್ದು, “Do not force us to invite Lashkar-e-Toiba and Taliban to Deal with Sanghis and Manvedis” ಎಂದು ಬರೆದಿದ್ದಾರೆ.

    ಉಗ್ರ ಸಂಘಟನೆಗಳ ಪರ ವಿವಾದಾತ್ಮಕವಾದ ಗೋಡೆ ಬರಹ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಕದ್ರಿ ಪೊಲೀಸರು ವಿವಾದಿತ ಬರಹದ ಮೇಲೆ ಪೈಂಟ್‌ ಬಳಿಯುತ್ತಿದ್ದಾರೆ.

     

    ಇದು ಮಧ್ಯರಾತ್ರಿ ಕಿಡಿಗೇಡಿಗಳು ನಡೆಸಿರುವ ಕೃತ್ಯ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಕದ್ರಿ ಪೊಲೀಸರು ಗೋಡೆ ಬರಹಗಳನ್ನು ಅಳಿಸಿ ಹಾಕಿದ್ದು, ತನಿಖೆ ನಡೆಸುತ್ತಿದ್ದಾರೆ. ಅಲ್ಲೆ ಹತ್ತಿರದಲ್ಲಿ ಕದ್ರಿ ಪೊಲೀಸ್ ಠಾಣೆ ಇದ್ದರೂ ಈ ಘಟನೆ ಬಗ್ಗೆ ಪೊಲೀಸರಿಗೆ ತಿಳಿಯದೇ ಇದ್ದದ್ದು ವಿಪರ್ಯಾಸವೇ ಸರಿ.

     

    Share Information
    Advertisement
    Click to comment

    You must be logged in to post a comment Login

    Leave a Reply