LATEST NEWS
ಮಂಗಳೂರು – ಮೂರು ತಿಂಗಳಿಗೆ ನೀರಿನ ಸಮಸ್ಯೆ ಇಲ್ಲ – ಮೇಯರ್ ಸುಧೀರ್ಶೆಟ್ಟಿ ಕಣ್ಣೂರು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಫೆಬ್ರವರಿ 29: ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 6 ಮೀ. ನೀರಿನ ಸಂಗ್ರಹವಿದ್ದು, ನೀರಿನ ಕೊರತೆ ಇಲ್ಲ ಎಂದು ಮೇಯರ್ ಸುಧೀರ್ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮೂರು ತಿಂಗಳಿಗೆ ಸಾಕಾಗುವಷ್ಟು ನೀರಿದೆ. ಡ್ಯಾಂಗೆ ಸ್ವಲ್ಪ ಪ್ರಮಾಣದ ಒಳಹರಿವು ಇನ್ನೂ ಇದೆ. 6 ಮೀಟರ್ ಎತ್ತರದಲ್ಲಿ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುವುದು. ಅದಕ್ಕಾಗಿ ಅಣೆಕಟ್ಟಿನ ಕೆಳಭಾಗದ ನದಿಯಲ್ಲಿ ಲಭ್ಯವಿರುವ ನೀರನ್ನು ತುಂಬೆ ಡ್ಯಾಂಗೆ ಪಂಪ್ ಮಾಡಲು ಅಣೆಕಟ್ಟಿನ ಇನ್ನೊಂದು ಬದಿಯಲ್ಲಿ ಎರಡು ಪಂಪ್ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಸುಧೀರ್ಶೆಟ್ಟಿ ತಿಳಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ನಗರದ ಹೊರವಲಯದಲ್ಲಿರುವ ಬೃಹತ್ ಕೈಗಾರಿಕೆಗಳಿಗೆ ಎಎಂಆರ್ ಡ್ಯಾಂನಿಂದ ನೀರು ಪೂರೈಕೆ ಆಗುತ್ತಿದ್ದು, ಕುಡಿಯುವ ನೀರಿಗೆ ಆದ್ಯತೆಯ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೆ ರೇಶನಿಂಗ್ ವ್ಯವಸ್ಥೆ ಇನ್ನು ಕೆಲವು ದಿನಗಳಲ್ಲಿ ಆರಂಭಿಸುವ ಸಾಧ್ಯತೆಗಳಿವೆ. ಈ ಬಗ್ಗೆ ಇನ್ನೂ ಯಾವುದೇ ಆದೇಶ ಮಾಡಲಾಗಿಲ್ಲ ಎಂದರು.
You must be logged in to post a comment Login