Connect with us

    DAKSHINA KANNADA

    mangalore : ದ.ಕ.ಜಿಲ್ಲೆಯ 223 ಪಂಚಾಯತ್ ಗಳ ಪಶು ಸಖಿಯವರಿಗೆ ಕಾರ್ಯಾಗಾರ

    ಮಂಗಳೂರು :  ದ.ಕ.ಜಿಲ್ಲೆಯ 223 ಪಂಚಾಯತ್ ಗಳ ಪಶು ಸಖಿಯವರಿಗೆ ಒಂದು ದಿನದ ಕಾರ್ಯಾಗಾರವನ್ನು  ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

    ಮಂಗಳೂರಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಈ ಕಾರ್ಯಾಗಾರವನ್ನು  “ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ಶ್ರೀಮತಿ ಶ್ರೀರೂಪಾ I.A.S. ಅವರು ಉದ್ಘಾಟಿಸಿದರು.

    ಕಾರ್ಯಗಾರದಲ್ಲಿ ಪಶು ಪಾಲನಾ ಹಾಗೂ ಪಶು ವೈಧ್ಯಕೀಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ. ಮಂಜುನಾಥ್ ಪಾಳೆಗಾರ್, ಡಾ.ಎಚ್.ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ನ ಕಾರ್ಯ ನಿರ್ವಾಹಣಾ ಅಧಿಕಾರಿ ಡಾ.ಆನಂದ ಕೆ, ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈ.ಲಿ. ನ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಅರುಣ್ ಕುಮಾರ್ ರೈ , ದ.ಕ‌ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ಧೇಶಕರಾದ ಕೆ.ಇ.ಜಯರಾಂ, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ, ಹಾಗೂ ಉಪ ನಿರ್ದೇಶಕರು ಪಾಲಿಕ್ಲಿನಿಕ್ ಡಾ.ಎ.ಬಿ.ತಮ್ಮಯ್ಯ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


    ಈ ಸಂದರ್ಭದಲ್ಲಿ ಪಶು ಸಖಿಯರಿಗೆ ಸಾಂಕೇತಿಕವಾಗಿ ಸಮವಸ್ತ್ರ ನೀಡಲಾಯಿತು, ಸಮವಸ್ತ್ರ ಒದಗಿಸಿ ಕೊಟ್ಟ ಭಾರತ್ ಆಗ್ರೊವೆಟ್ ಇಂಡಸ್ಟ್ರೀಸ್ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply