Connect with us

LATEST NEWS

ಮಂಗಳೂರು – ಪುತ್ರ ಶೋಕದಲ್ಲೂ ಮಗನ ಅಂಗಾಂಗ ದಾನ ಮಾಡಿದ ಅಲ್ಫೋನ್ಸ್ ಸೋನಿಯಾ ಡಿಸೋಜಾ ದಂಪತಿ

ಮಂಗಳೂರು ಅಕ್ಟೋಬರ್ 19: ತನ್ನ ಮಗನ ಸಾವಿನ ಶೋಕದಲ್ಲೂ ಅಂಗಾಂಗ ದಾನ ಮಾಡಿ ಶ್ರೇಷ್ಠ ನಿರ್ಧಾರ ತೆಗೆದುಕೊಂಡ ಆಶಿಶ್ ತಂದೆ ಅಲ್ಫೋನ್ಸ್ ತಾಯಿ ಸೋನಿಯಾ ಡಿಸೋಜಾ ಅವರನ್ನು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಭೇಟಿ ಮಾಡಿ ಸಾಂತ್ವಾನ ತಿಳಿಸಿದರು.


ಮಂಗಳೂರಿನ ಆಶಿಶ್ ಡಿಸೋಜಾ ಎಂಬ 13 ವರ್ಷದ ಬಾಲಕ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ್ದು, ಈ ನಡುವೆ ಮಗನ ಸಾವಿನ ಶೋಕದಲ್ಲೂ ಬಾಲಕನ ತಂದೆತಾಯಿ ಅಂಗಾಂಗ ದಾನ ಮಾಡುವ ಶ್ರೇಷ್ಠ ನಿರ್ಧಾರ ತೆಗೆದುಕೊಂಡಿದ್ದಾರೆ. ಆಶಿಶ್ ತಂದೆ ಅಲ್ಫೋನ್ಸ್ ತಾಯಿ ಸೋನಿಯಾ ಡಿಸೋಜಾ ನಿಜಕ್ಕೂ ಆದರ್ಶ ದಂಪತಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


ಅಗತ್ಯ ಚಿಕಿತ್ಸೆ ಪಡೆದ ಬಳಿಕ ಡೆಂಗ್ಯೂ ಜ್ವರದಿಂದ ಗುಣಮುಖರಾಗಿದ್ದ ಆಶಿಶ್, ಇನ್ನೇನು ಮನೆಗೆ ತೆರಳಲು ತಯಾರಿ ನಡೆಸುವ ಸಂದರ್ಭದಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು. ತಾಯಿ ಸೋನಿಯಾ ಡಿಸೋಜಾ ತಮ್ಮ ಪುತ್ರರ ಎದುರು ಅಂಗಾಂಗ ದಾನದ ಮಹತ್ವದ ಬಗ್ಗೆ ಸದಾ ಮಾತನಾಡುತ್ತಿದ್ದರು. ತಾವು ನಿಧನರಾದರೆ ತಮ್ಮ ಅಂಗಾಂಗಗಳನ್ನ ದಾನ ಮಾಡುವಂತೆ ದಂಪತಿಗಳು ತಮ್ಮ ಮಕ್ಕಳಿಗೆ ಸೂಚನೆ ನೀಡಿದ್ದರು. ದುರಾದೃಷ್ಟ ತಮ್ಮ ಕಣ್ಣೆದುರೇ ಪುತ್ರನ ಸಾವನ್ನ ನೋಡಬೇಕಾಗಿ ಬಂತು. ಅತ್ಯಂತ ನೋವಿನ ಸಂದರ್ಭದಲ್ಲೂ, ತಾವು ಪಾಲಿಸಬೇಕು ಎಂದುಕೊಂಡಿದ್ದ ಆದರ್ಶವನ್ನ ಮರೆಯದ ಅಲ್ಫೋನ್ ಮತ್ತು ಸೋನಿಯಾ ಡಿಸೋಜಾ, ಪುತ್ರ ಆಶಿಶ್ ಅಂಗಾಂಗ ದಾನ ಮಾಡುವ ನಿರ್ಧಾರ ತೆಗೆದುಕೊಂಡರು. ಆಶಿಶ್ ಎರಡು ಕಣ್ಣುಗಳನ್ನ ದಾನ ಮಾಡುವುದರ ಜೊತೆಗೆ ದೇಹ ದಾನವನ್ನ ಕೂಡ ಮಾಡಿದ್ದರೆ. ದಂಪತಿಯ ಮಾನವೀಯ ಕಾರ್ಯ ಮಾದರಿಯಾಗಿದ್ದು, ಇತರರಿಗೆ ಪ್ರೇರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ಕುಟುಂಬದ ಮನೆಗೆ ತೆರಳಿದ ಸಚಿವರು ಸಾಂತ್ವನ ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *