DAKSHINA KANNADA
ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ವಿಟ್ಲ ಮನೆಲಾ ಚರ್ಚ್ ಪಾದ್ರಿ ಅಮಾನತು..!
ಮಂಗಳೂರು : ವಿಟ್ಲ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಚರ್ಚ್ ಪಾದ್ರಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ ಆದೇಶ ಹೊರಡಿಸಿದೆ.
ಘಟನೆಯ ಆರೋಪಿಯಾಗಿರುವ ಮನೆಲಾ ಚರ್ಚ್ ಧರ್ಮಗುರು ಫಾ. ನೆಲ್ಸನ್ ಓಲಿವೆರಾ ಅವರ ಚರ್ಚಿನ ಧಾರ್ಮಿಕ ಕರ್ತವ್ಯಗಳಿಗೆ ಬೇರೋಬ್ಬ ಧರ್ಮಗುರುವನ್ನು ನೇಮಕ ಮಾಡಲಾಗಿದೆ. ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ ಆಡಳಿತ ಹಲ್ಲೆ ಬಗ್ಗೆ ಕಾನೂನಿನಡಿ ಪ್ರಕರಣ ದಾಖಲಾಗಿದ್ದು ಕಾನೂನು ಒಂದು ಕಡೆ ತನಿಖೆ ನಡೆಸುತ್ತಿದ್ದರೆ ಧರ್ಮ ಪ್ರಾಂತ ಕೂಡ ತನ್ನ ಆಂತರಿಕ ತನಿಖೆಯನ್ನು ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
You must be logged in to post a comment Login