ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ನಾಲ್ಕು ಉಕ್ಕಿನ ದೋಣಿಗಳನ್ನು ವಶಪಡಿಕೊಂಡಿದ್ದಾರೆ.

ಮಂಗಳೂರು ಹೊರವಲಯದ ಹಳೆಯಂಗಡಿ ಕೊಪ್ಪಕಾಡು ಪ್ರದೇಶದ ನಂದಿನಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಮುಲ್ಕಿ ಪೊಲೀಸರ ಸಹಾಯದೊಂದಿಗೆ ಈ ದಾಳಿ ನಡೆಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಮರಳು ತೆಗೆಯುತ್ತಿದ್ದ ನಾಲ್ಕು ದೋಣಿಗಳನ್ನು ಕ್ರೇನ್ ಬಳಸಿ ಮೇಲಕ್ಕೆ ತೆಗೆದು ಮುಟ್ಟುಗೋಲು ಹಾಕಿಕೊಂಡಿದ್ದು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.