Connect with us

LATEST NEWS

ಮಂಗಳೂರು ಶಾರದಾ ಮಹೋತ್ಸವಕ್ಕೆ ಗೋಕರ್ಣ ಮಠಾಧೀಶರಿಂದ ಚಾಲನೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ , ಆಚಾರ್ಯ ಮಠ ವಠಾರದಲ್ಲಿ ಪೂಜಿಸಲ್ಪಡುವ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 101 ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವಕ್ಕೆ  ಗೋಕರ್ಣ ಮಠಾಧೀಶರು ಚಾಲನೆ ನೀಡಿದರು.

ಶ್ರೀ ಗೋಕರ್ಣ ಪರ್ತಗಾಳಿ ಮಠದ ಮಠಾಧಿಪತಿಗಳಾದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಯವರು ಭೇಟಿ ನೀಡಿದ್ದು ಶಾರದಾ ಮಾತೆಗೆ ಪೂಜೆ ಸಲ್ಲಿಸಿ ನೆರೆದ ಭಜಕರಿಗೆ ಆಶೀರ್ವದಿಸಿದರು .

ಪ್ರಾರಂಭದಲ್ಲಿ ಶ್ರೀಗಳವರು ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಬಳಿಕ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಂಡ ಸ್ಥಳಕ್ಕೆ ಆಗಮಿಸಿದರು .

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ , ದೇವಳದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ ಹಾಗೂ ಸಹಸ್ರಾರು ಭಜಕರು ಉಪಸ್ಥಿತರಿದ್ದರು .

Share Information
Advertisement
Click to comment

You must be logged in to post a comment Login

Leave a Reply