Connect with us

    DAKSHINA KANNADA

    ಮಂಗಳೂರು: ಕೊಟ್ಟಿಗೆಯಿಂದ ದನ ಕಳವು- ಐವರ ಬಂಧನ

    ಮಂಗಳೂರು, ಆಗಸ್ಟ್ 17: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್‌ ಅಶ್ಪಕ್ ಆಲಿಯಾಸ್‌ ಶಮೀರ್‌ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಅದ್ಯಪಾಡಿ ಅಜರುದ್ದೀನ್‌ ಆಲಿಯಾಸ್‌ ಅಜರ್‌ (31), ಬಜಾಲ್‌ ಪಡ್ಪುವಿನ ಸುಹೈಲ್‌ (19), ಬಜಾಲ್‌ ಪಕ್ಕಲಡ್ಕದ ಮೊಹಮ್ಮದ್‌ ಅಫ್ರೀದ್‌ (25) ಮತ್ತು ಬಜಾಲ್‌ ಕಟ್ಟಪುಣಿಯ ಶಾಹೀದ್‌ ಆಲಿಯಾಸ್‌ ಚಾಯಿ (19) ಬಂಧಿತರು.

    ಅಜರುದ್ದೀನ್‌ ವಿರುದ್ಧ ಬಜಪೆ ಠಾಣೆಯಲ್ಲಿ, ಮೊಹಮ್ಮದ್‌ ಅಫ್ರೀದ್‌ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರು, ಕತ್ತಿ ಮತ್ತು ಹಗ್ಗಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ದೋಟ ಹೌಸ್ ಅಶ್ವಿ‌ನ್‌ ಎಂಬವರ ಮನೆಯಲ್ಲಿ ಜು. 20ರಂದು ಸಂಜೆ 6 ಗಂಟೆಗೆ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಮರುದಿನ ಮುಂಜಾನೆ ಸುಮಾರು 3.30ಕ್ಕೆ ದನ ಕೂಗಿದ ಸದ್ದು ಕೇಳಿ ಮನೆಯವರು ನೋಡಿದಾಗ ಕೊಟ್ಟಿಗೆಯಲ್ಲಿದ್ದ ಸುಮಾರು 40 ಸಾವಿರ ಮೌಲ್ಯದ ಹಸು ಕಾಣೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply