LATEST NEWS
ಮಂಗಳೂರು : ಕಾವೂರಿನಲ್ಲಿ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನ, ಮನೆಯಜಮಾನನ ಬೊಬ್ಬೆಗೆ ಕಾಲ್ಕಿತ್ತ ಕಳ್ಳರು..!
ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ.
ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ ಮನೆಯ ಕಡೆ ಬಂದ ನಾಲ್ವರ ತಂಡ ಗೇಟಿನ ಬೀಗ ಮುರಿದು ಮನೆಯ ಮುಂಬಾಗಿಲ ಬೀಗವನ್ನು ರಾಡಿನಿಂದ ಮುರಿಯಲು ಯತ್ನಿಸಿದ್ದಾರೆ. ಈ ಸಂದರ್ಭ ಮನೆ ಯಜಮಾನರಿಗೆ ಎಚ್ಚರಿಕೆಯಾಗಿ ಬೊಬ್ಬೆ ಹಾಕಿದಾಗ ಕಳ್ಳರು ಕಾಲ್ಕಿತ್ತಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.
ದೇವಸ್ಥಾನದಲ್ಲಿ ಕಳವಿಗೆ ಯತ್ನ : ಶನಿವಾರ ತಡರಾತ್ರಿ ಸುಮಾರು ನಾಲ್ವರ ತಂಡ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿದೆ. ದೇವಸ್ಥಾನದ ಬಳಿ ಓಡಾಡುತ್ತಿದ್ದ ಕಳ್ಳರ ಕೈಯಲ್ಲಿದ್ದ ಟಾರ್ಚ್ನ ಬೆಳಕು ದೇವಸ್ಥಾನದ ಪಕ್ಕದ ಮನೆಯವರಿಗೆ ಕಂಡು ಅವರು ಎಚ್ಚರಗೊಂಡರು. ಮನೆಯ ಹೊರಭಾಗದ ಲೈಟ್ಗಳನ್ನು ಹಾಕಿದಾಗ ಕೆಲವು ಮಂದಿ ದೇವಸ್ಥಾನದ ಬಳಿಯಿಂದ ಹೋಗುತ್ತಿರುವುದು ಗೊತ್ತಾಗಿದೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.
You must be logged in to post a comment Login