Connect with us

    DAKSHINA KANNADA

    ಮಂಗಳೂರು : ಈ ಶಿಳ್ಳೆಕ್ಯಾತ ಅಲೆಮಾರಿಗಳು ಮನುಷ್ಯರಲ್ಲವೇ..!!?

    ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಕಳೆದ ಹಲವಾರು ವರುಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಕಾಯಕ ನಡೆಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ತಮ್ಮ ಗುಡಿಸಲುಗಳನ್ನು ಕಳೆದುಕೊಂಡು ಬೀದಿಪಾಲಾಗುವ ಪರಿಸ್ಥಿತಿ ಬಂದೊದಗಿದೆ.

    ಮಂಗಳೂರು : ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಕಳೆದ ಹಲವಾರು ವರುಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಕಾಯಕ ನಡೆಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ತಮ್ಮ ಗುಡಿಸಲುಗಳನ್ನು ಕಳೆದುಕೊಂಡು ಬೀದಿಪಾಲಾಗುವ ಪರಿಸ್ಥಿತಿ ಬಂದೊದಗಿದೆ.

    ಸ್ಮಾರ್ಟ್ ಸಿಟಿ ಯೋಜನೆಯಡಿ 30 ಕೋಟಿ ವೆಚ್ಚದಲ್ಲಿ (PROMINADE PACKAGE 2A) ನದಿ ತೀರದಲ್ಲಿ ನಿರ್ಮಿಸಲು ಹೊರಟಿರುವ ವಾಕಿಂಗ್ ಟ್ರಾಕ್, ಸೈಕಲ್ ಟ್ರಾಕ್, ಪ್ಲೆ ಏರಿಯಾದಂತಹ ಕಾಮಗಾರಿಗಳು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲುಗಳಿರುವ ಜಾಗದಲ್ಲೇ ನಿರ್ಮಾಣವಾಗಲಿರುವುದರಿಂದ ಈ ಸಮುದಾಯ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಬದುಕುತ್ತಿರುವ ಸಣ್ಣ ಗುಡಿಸಲುಗಳನ್ನು ಕಳೆದುಕೊಂಡು ಬೀದಿಗೆ ಬೀಳುವ ಹೀನಾಯ ಪರಿಸ್ಥಿತಿ ಉಂಟಾಗಲಿದೆ.

    ಈ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ, ಶಾಶ್ವತ ಸೂರಿಗಾಗಿ ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಹಲವು ವರುಷಗಳು ಕಳೆದರೂ ಈವರೆಗೂ ಯಾವುದೇ ಒಂದು ಸವಲತ್ತುಗಳನ್ನು ತೆಗೆಸಿಕೊಡಲು ಆಳುವ ಸರಕಾರಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ ಸಾಧ್ಯವಾಗಿಲ್ಲ.

    ಸದ್ಯ ಅವರೇ ಟರ್ಪಾಲ್ ಹಾಸಿ ನಿರ್ಮಿಸಿ ಬದುಕುತ್ತಿರುವ ಗುಡಿಸಲುಗಳಲ್ಲೂ ನೆಮ್ಮದಿಯಿಂದ ಜೀವನ ನಡೆಸುತ್ತಿರುವಾಗ ಇಂತಹ ಯೋಜನೆಗಳು ಆ ಸಮುದಾಯವನ್ನು ಇನ್ನಷ್ಟು ಅನಾಥರನ್ನಾಗಿಸುವ ಸ್ಥಿತಿಗೆ ತಲುಪಿಸುತ್ತಿದೆ.

    ಆದ್ದರಿಂದ ಸ್ಮಾರ್ಟ್ ಸಿಟಿ ಯೋಜನೆಯಿಂದ ಮನೆ ಕಳೆದುಕೊಂಡು ಬೀದಿ ಪಾಲಾಗುವ ಆತಂಕದಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಗುಡಿಸಲುಗಳನ್ನು ಉಳಿಸಲು ಅಥವಾ ಪರ್ಯಾಯ ಶಾಶ್ವತ ಮನೆ ನಿರ್ಮಿಸಿಕೊಡಲು ಸಂಬಂಧಪಟ್ಟ ಇಲಾಖೆ, ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

    ಜಿಲ್ಲಾಡಳಿತಕ್ಕೆ ನಿಯೋಗದಿಂದ ಮನವಿ..!
    ಸ್ಮಾರ್ಟ್ ಸಿಟಿಯ ಯೋಜನೆಯಿಂದ ತಮ್ಮ ಗುಡಿಸಲು ಕಳೆದುಕೊಂಡು ಬೀದಿಗೆ ಬರುವ ಭೀತಿಯಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಶಾಶ್ವತ ಮನೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿ ಹಾಗೂ ಸಂತ್ರಸ್ತರುಗಳ ನಿಯೋಗದಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿಯನ್ನು ಸಲ್ಲಿಸಲಾಯಿತು.

    ನಿಯೋಗದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಸಂತೋಷ್ ಬಜಾಲ್, ಅಧ್ಯಕ್ಷರಾದ ರವಿ ಟಿ.ಎನ್, ಕಾರ್ಯದರ್ಶಿ ವೆಂಕಟೇಶ್, ಸಂತ್ರಸ್ತರುಗಳಾದ ದೊರೆ, ಚಿರಂಜೀವಿ, ಮಧು, ರಮೇಶ, ಮಂಗಳ, ಸರಳ, ರೇಣುಕಾ, ಲಕ್ಷ್ಮಣ, ಶಾಂತ ಕುಮಾರ ಮುಂತಾದವರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply