LATEST NEWS
ಮಂಗಳೂರು : ಇಳಿ ವಯಸ್ಸಿನ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣು..!
ಇಳಿ ವಯಸ್ಸಿನ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರು: ಇಳಿ ವಯಸ್ಸಿನ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಜೀವಾಂತ್ಯ ಮಾಡಿಕೊಂಡ ಸಹೋದರಿಯರು ಆಗಿದ್ದಾರೆ. 78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆಗೆ ಮನೆಗೆ ತೆರಳಿದಾಗ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಜಗನ್ನಾಥ ಭಂಡಾರಿ ಮನೆಗೆ ತೆರಳಿದಾಗ ಮನೆಯ ಬಾಗಿಲು ಮುಚ್ಚಲ್ಪಟ್ಟಿತ್ತು. ಕಿಟಕಿಯಿಂದ ನೋಡಿದಾಗ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ, ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
You must be logged in to post a comment Login