Connect with us

DAKSHINA KANNADA

ಮಂಗಳೂರು : ಕಣ್ಣೂರಿನಲ್ಲಿ ಹಲ್ಲೆಗೊಳಗಾದ ಸಿಟಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ VHP ನಾಯಕ ಶರಣ್ ಪಂಪ್‌ವೆಲ್..!

ಮಂಗಳೂರು ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಿನ್ನೆ ರಾತ್ರಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಸಿಟಿ ಬಸ್ ಕಂಡಕ್ಟರ್ ಯಶವಂತ್ ಅವರನ್ನು ವಿಶ್ವ ಹಿಂದೂ ಪರಿಷತ್ ಮುಖಂಡ  ಶರಣ್ ಪಂಪ್‌ ವೆಲ್ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಮಂಗಳೂರು : ಮಂಗಳೂರು ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಿನ್ನೆ ರಾತ್ರಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಸಿಟಿ ಬಸ್ ಕಂಡಕ್ಟರ್ ಯಶವಂತ್ ಅವರನ್ನು ವಿಶ್ವ ಹಿಂದೂ ಪರಿಷತ್ ಮುಖಂಡ  ಶರಣ್ ಪಂಪ್‌ ವೆಲ್ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಬಸ್ ಸಿಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ,

ಈ ಮಧ್ಯೆ ಬೆಳಗ್ಗಿನಿಂದ ಅಡ್ಯಾರ್ , ಕಣ್ಣೂರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸಿಟಿ ಬಸ್‌ ಗಳು ಸಂಚಾರವನ್ನು ಪುನರಾರಂಭಗೊಂಡಿದೆ.

ಸಿಟಿ ಬಸ್ ಮಾಲಕರ ಸಂಘ ಮತ್ತು ಎಸಿಪಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮತ್ತೆ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಭರವಸೆ ನೀಡಿದ ಬಳಿಕ ಪ್ರಕರಣ ಸುಖಾಂತ್ಯಗೊಂಡಿದೆ ಎಂದು ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *