DAKSHINA KANNADA
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನ ಸಂಚಾರ ನಿರ್ಭಂಧ
ಮಂಗಳೂರು ಅಗಸ್ಟ್ 04: ಮಳೆಯಿಂದಾಗಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಸಂಪಾಜೆ ಘಾಟ್ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಸಹ ಕಂಡುಬಂದಿವೆ. ಇದರಿಂದಾಗಿ ಭಾರಿ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್ ಹಾಗೂ ಲಘುವಾಹನಗಳಿಗಷ್ಟೇ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
You must be logged in to post a comment Login