Connect with us

    LATEST NEWS

    ಮಣಿಪಾಲ- ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಯುವ ವೈದ್ಯ ಸಾವು

    ಉಡುಪಿ ಜುಲೈ 1: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಕೆಎಂಸಿ ಆಸ್ಪತ್ರೆಯ ಯುವ ವೈದ್ಯರೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಕೆಎಂಸಿ ಆಸ್ಪತ್ರೆಯ ಮೂಳೆ ತಜ್ಞ ಹೈದರಾಬಾದ್ ಮೂಲದ ಡಾ. ಸೂರ್ಯ ನಾರಾಯಣ ಯಾನೆ ಡಾ. ಸೂರಿ(26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.


    ಶುಕ್ರವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಣಿಪಾಲದ ಹೋಟೆಲ್ ಹಾಟ್ ಆ್ಯಂಡ್ ಸ್ಪೈಸಿ ಎದುರುಗಡೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ನಂತರ ಉರುಳಿಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಡಾ.ಸೂರ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply