Connect with us

LATEST NEWS

ಉಡುಪಿ – ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತ ಮಾಡಿ ಪರಾರಿಯಾದ ಯುವಕರು…!!

Share Information

ಉಡುಪಿ ಜುಲೈ 11 : ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದಲ್ಲಿ ನಿನ್ನೆ ಸಂಜೆ ನಡೆದಿದ್ದು, ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ.


ಕಾರು ಪರ್ಕಳ ಕಡೆಯಿಂದ ಮಣಿಪಾಲಕ್ಕೆ ಬರುವಾಗ ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಆಬಳಿಕ ಹಿಂದಕ್ಕೆ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ತರಚಿದ ಗಾಯವಾಗಿದೆ.

ಪರ್ಕಳದಿಂದ ಬರುವಾಗಲೆ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿದೆ ಎನ್ನಲಾಗಿದೆ. ಮಣಿಪಾಲದಲ್ಲಿ ಯುಟರ್ನ್ ಮಾಡಿಕೊಂಡು ಪರ್ಕಳ ಕಡೆಗೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಪರ್ಕಳ ಸಮೀಪ ಕಾರು ನಿಲ್ಲಿಸಿದ ಮೂವರು ಅಪರಿಚಿತರು ಸಮೀಪದ ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಸ್ಥಳೀಯರು, ಪೊಲೀಸರು ಹುಡುಕಾಟ ನಡೆಸಿದರೂ ಪರಿಸರದಲ್ಲಿ ಯಾವುದೆ ಸುಳಿವು ಸಿಕ್ಕಿಲ್ಲ. ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply