Connect with us

LATEST NEWS

ಮಣಿಪಾಲ – ಕ್ಷುಲ್ಲಕ ಕಾರಣಕ್ಕೆ ವಿಧ್ಯಾರ್ಥಿ ಮೇಲೆ ತಂಡದಿಂದ ಹಲ್ಲೆ

ಉಡುಪಿ ಮಾರ್ಚ್ 25: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ತಂಡವೊಂದು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೆಬೆಟ್ಟು ಪ್ರದೇಶದಲ್ಲಿ ನಡೆದಿದೆ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ. ಡಿಆಂಡ್ ಟಿ ಬಾರ್ ನಲ್ಲಿ ತಂಡವೊಂದು ಮಧ್ಯಸೇವಿಸುತಿತ್ತು, ಈ ವೇಳೆ ಅರುಷ್ ಕಾಲು ತಾಗಿದ ಹಿನ್ನಲೆ ತಂಡ ಯುವಕನ ಜೊತೆ ತಗಾದೆ ತೆಗೆದಿದೆ. ಬಳಿಕ ಯುವಕನ ಮೇಲೆ ಹಲ್ಲೆ ಮಾಡಿದೆ ಎಂದು ಹೇಳಲಾಗಿದೆ. ಇದಾದ ಬಳಿಕ ಯುವಕನ ಅಪಾರ್ಟ್ ಮೆಂಟ್ ಗೆ ತೆರಳಿದ ತಂಡ ಅಲ್ಲೂ ಕೂಡ ಯುವಕನ ಮೇಲೆ ಹಲ್ಲೆ ನಡೆಸಿದೆ, ಈ ವೇಳೆ ಅರುಷ್ ಸ್ನೇಹಿತರು ಸ್ಥಳಕ್ಕೆ ಆಗಮಿಸಿದ್ದು, ಹಲ್ಲೆಯನ್ನು ತಪ್ಪಿಸಿದ್ದಾರೆ. ಆ ಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ತಂಡ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದೆ. ಸದ್ಯ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೆ ಮಣಿಪಾಲ ಪೊಲೀಸರು ಅರುಷ್ ನನ್ನ ಠಾಣೆಗೆ ಕರೆಸಿ ದೂರ ದಾಖಲಿಸಿದ್ದಾರೆ. ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *