Connect with us

DAKSHINA KANNADA

ಮಂಜೇಶ್ವರ -ತಾಯಿಯನ್ನು ಕೊಂದಿದ್ದಕ್ಕೆ ಕಾರಣ ತಿಳಿಸಿದ ಪಾಪಿ ಮಗ

ಕಾಸರಗೋಡು ಜೂನ್ 28: ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.


ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ ಆರೋಪಿ ಮೆಲ್ವಿನ್ ಜೂನ್ 25 ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾಳ ತಲೆಗೆ ಮಗ ಮೆಲ್ವಿನ್ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಬಳಿಕ ಅಲ್ಲಿಂದ ಎಳೆದುಕೊಂಡು ಮನೆಯ ಹಿಂಭಾಗಕ್ಕೆ ಹೋಗಿ ಕಾಡಿನಂತಹ ಜಾಗದಲ್ಲಿ ಎಸೆದಿದ್ದಾನೆ. ಬಳಿಕ ಪೆಟ್ರೋಲ್ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದ. ಬಳಿಕ ಮನೆಯ ಹತ್ತಿರದಲ್ಲಿದ್ದ ಆತನ ಸಂಬಂಧಿ ಲೊಲಿಟಾ ಮನೆಯ ಬಾಗಿಲು ಬಡಿದಿದ್ದಾನೆ. ಲೊಲಿಟಾಳಿಗೆ ತನ್ನ ತಾಯಿಗೆ ಹುಷಾರಿಲ್ಲ. ಸೀರಿಯಸ್ ಆಗಿದ್ದಾಳೆ ಎಂದು ಹೇಳಿದ್ದಾನೆ. ಇದನ್ನು ಕೇಳಿದ ಲೊಲಿಟಾ ಮಗುವನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು ಓಡೋಡಿ ಬಂದಿದ್ದಾಳೆ. ಮನೆಗೆ ಬಂದ ಲೊಲಿಟಾಳಿಗೆ ಹೊಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಆಗ ಅಲ್ಲಿಂದಲೊಲಿಟಾ ತಪ್ಪಿಸಿಕೊಂಡು ಕಾಡಿಗೆ ಓಡಿದ್ದಾಳೆ. ಮುಂಜಾನೆ 5 ಗಂಟೆಗೆ ಒಂದು ಮನೆ ಬಳಿ ಹೋದಾಗ ಅಲ್ಲಿಯವರು ನೋಡಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಸಿದ್ದಾರೆ. ಸದ್ಯ ಲೊಲಿಟಾ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.


ಕೊಲೆ ಮಾಡಿದ ಬಳಿಕ ಆರೋಪಿ ಮೆಲ್ವಿನ್ 2 ಕಿಲೋಮೀಟರ್ ಓಡಿ ಹೋಗಿ ಆಟೋ ಹಿಡಿದು ಹೊಸಂಗಡಿಗೆ ತಲುಪಿದ್ದಾನೆ. ಬಳಿಕ ಮಂಗಳೂರು ಬಸ್ ಹತ್ತಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ನಲ್ಲಿ ಇಳಿದಿದ್ದಾನೆ. ಅಲ್ಲಿಂದ ಕುಂದಾಪುರ ಬಸ್ ಹತ್ತಿ ಬೈಂದೂರು ತಲುಪಿದ್ದಾನೆ. ಮೆಲ್ವಿನ್ ಅರ್ಥ್ ಮೂವರ್ಸ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಬೈಂದೂರು ಸುತ್ತಾಮುತ್ತಾ ಕಲ್ಲಿನಕೋರೆಯಲ್ಲಿ ಈ ಹಿಂದೆ ಕೆಲಸ ಮಾಡಿದ್ದ. ಆದ್ರಿಂದ ಆ ಜಾಗಕ್ಕೆ ಹೋಗಲು ಆತನ ಇಲ್ಲಿಗೆ ಬಂದಿದ್ದ. ಇನ್ನು ಒಂದು ಅಂಗಡಿಯಲ್ಲಿ ಕುಳಿತುಕೊಂಡಿದ್ದಾಗ ಬೈಂದೂರು ಪೊಲೀಸರ ಸಹಕಾರದಿಂದ ಕೇರಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮೆಲ್ವಿನ್ ವಿಚಾರಣೆ ನಡೆಸಿದ ವೇಳೆ ತಾನು ನಿರುದ್ಯೋಗದಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದೆ. ₹1 ಲಕ್ಷ ಸಾಲ ಪಡೆಯಲು ದಾಖಲೆ ಪತ್ರ ಕೇಳಿದಾಗ ತಾಯಿ ಒಪ್ಪಿರಲಿಲ್ಲ. ಜೊತೆಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಲೋಲಿತಾ ಅವರೂ ಈ ವಿಚಾರದಲ್ಲಿ ತನ್ನ ತಾಯಿಗೆ ಬೆಂಬಲ ನೀಡಿದ ಕಾರಣ ಅವರನ್ನೂ ಕೊಲೆ ಮಾಡಲು ಯತ್ನಿಸಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *