Connect with us

LATEST NEWS

ಮಣ್ಣಗುಡ್ಡ ವಾರ್ಡಿನಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕಾಮತ್ ಭೂಮಿಪೂಜೆ

ಮಂಗಳೂರು ಡಿಸೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡೆ ವಾರ್ಡಿನಲ್ಲಿ ಸಾರ್ವಜನಿಕರ ಹಾಗೂ ಪಾಲಿಕೆ ಸದಸ್ಯರ ಮನವಿಯಂತೆ ಗುಂಡೂರಾವ್ ಲೇನ್ ದತ್ತ ಅಪಾರ್ಟ್‌ಮೆಂಟ್ ಬಳಿ 18 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಲುಸಂಕ ನಿರ್ಮಾಣ, 4.80 ಲಕ್ಷ ರೂಪಾಯಿ ವೆಚ್ಚದಲ್ಲಿ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್ ಬಳಿಯಿರುವ ಆಟೋರಿಕ್ಷಾ ನಿಲ್ದಾಣಕ್ಕೆ ಮೇಲ್ಛಾವಣಿ ನಿರ್ಮಾಣ ಕಾಮಗಾರಿ, ಹಾಗೂ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಮಠದಕಣಿ ಸಂಘನಿಕೇತನ ಹಿಂಭಾಗದಿಂದ ಬರ್ಕೆಯ ವರೆಗೆ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮಣ್ಣಗುಡ್ಡೆ ಪರಿಸರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ಕೆಲ ವರ್ಷಗಳಲ್ಲಿ ಈ ಪರಿಸರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *