Connect with us

    KARNATAKA

    ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂತ್ರಾಲಯ ಶ್ರೀಗಳಿಂದ ಧನ ಸಹಾಯ

    ರಾಯಚೂರು, ಫೆಬ್ರವರಿ 28: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆ ಕೊಲೆಯಾದ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಧನ ಸಹಾಯ ಮಾಡಿದ್ದಾರೆ.

    ಭಜರಂಗದಳದ ಮೃತ ಹರ್ಷ ಕುಟುಂಬಕ್ಕೆ ರಾಯರ ಪ್ರಸಾದ ರೂಪವಾಗಿ 50 ಸಾವಿರ ರೂಪಾಯಿಗಳನ್ನು ಶ್ರೀಗಳು ನೀಡಿದ್ದಾರೆ. ಸದ್ಯ ಆ ಹಣವನ್ನು ಹರ್ಷ ಕುಟುಂಬಸ್ಥರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಮಂತ್ರಾಲಯ ಮಠದ ಆಡಳಿತ ಮಂಡಳಿ ತಿಳಿಸಿದೆ. 

    ಹಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಈಗಾಗಲೇ ಹತ್ಯೆ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply