Connect with us

    KARNATAKA

    ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ: ಪಕ್ಷೇತರ ಅಭ್ಯರ್ಥಿಯ ಭರವಸೆ!

    ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ.

    ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.

    ”ಅರಭಾವಿ ಕ್ಷೇತ್ರದ ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸಲಾಗುವುದು. ವಧು-ವರರ ಮದುವೆ ಭಾಗ್ಯ ಯೋಜನೆ 2023 ಗ್ಯಾರಂಟಿ 100” ಎಂದು ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

    ಜೊತಗೆ ಶ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಸೇರಿ ಹಲವು ಭರವಸೆಗಳು ಇವರ ಪ್ರಣಾಳಿಕೆಯಲ್ಲಿದೆ. ಸದ್ಯ ಪಕ್ಷೇತರ ಅಭ್ಯರ್ಥಿಯ ಈ ಪ್ರಣಾಳಿಕೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.
    Share Information
    Advertisement
    Click to comment

    You must be logged in to post a comment Login

    Leave a Reply