Connect with us

KARNATAKA

ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳಿಂದ ಮಾರ್ವಾಡಿ ಹಟಾವೋ ಅಭಿಯಾನ: ಮಾರ್ವಾಡಿ ವರ್ತಕರಿಂದ ತೀವ್ರ ಆಕ್ಷೇಪ

ಉಡುಪಿ, ಅಕ್ಟೋಬರ್ 28: ಉಡುಪಿಯಲ್ಲಿ ಕೆಲವು ಕಿಡಿಗೇಡಿಗಳು ಮಾರ್ವಾಡಿ ಹಟಾವೊ ಅಭಿಯಾನ ಹಮ್ಮಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಮ್ಮೂರು ನಮ್ಮ ಜನ ನಮ್ಮ ವ್ಯಾಪಾರ ನಮ್ಮ ಜನರಿಗೆ… ಮಾರ್ವಾಡಿ ಹಠಾವೋ… ಎಂಬ ಪೋಸ್ಟ್ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ.ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು,ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾರ್ವಾಡಿ ವರ್ತಕ ನಾರಾಯಣ ಸಿಂಗ್ ,ನಾವು ಉಡುಪಿಯಲ್ಲಿ ಎರಡು ಮೂರು ದಶಕಗಳಿಂದ ವ್ಯಾಪಾರ ನಡೆಸುತ್ತಿದ್ದೇವೆ.ಇದನ್ನು ಸಹಿಸದ ಕೆಲವರು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ.ಯಾವುದೋ ಒಂದು ಅಂಗಡಿಯಲ್ಲಿ ಏನೋ ಸಣ್ಣಪುಟ್ಟ ಸಮಸ್ಯೆ ಆಗಿರಬಹುದು.ಹಾಗೆಂದು ಎಲ್ಲ ಮಾರ್ವಾಡಿಗಳು ಕೂಡ ಮೋಸಗಾರರು ಎಂದರ್ಥವಲ್ಲ. ಮಾಡಿದ ತಪ್ಪನ್ನು ಎಲ್ಲರ ಮೇಲೆ ಹೊರಿಸಿ ನೀವು ಮಾರ್ವಾಡಿಗಳ ಅಂಗಡಿಗಳಲ್ಲಿ ವ್ಯಾಪಾರ ಮಾಡಬೇಡಿ ಎಂಬ ಅಭಿಯಾನ ಹಮ್ಮಿಕೊಳ್ಳುವುದು ತಪ್ಪು.ನಾವು ಭಾರತೀಯರು. ದೇಶದ ಯಾವ ಭಾಗದಲ್ಲಿ ಬೇಕಾದರೂ ಹೋಗಿ ವ್ಯಾಪಾರ ಮಾಡುವ ಅವಕಾಶ,ಹಕ್ಕು ಎಲ್ಲರಿಗೂ ಇದೆ. ನಾವಿಲ್ಲಿ ಎಲ್ಲರ ಜೊತೆ ತುಂಬಾ ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಿದ್ದೇವೆ.ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಮಾರ್ವಾಡಿ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಮಾತ್ರವಲ್ಲ, ಈ ರೀತಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *