Connect with us

    LATEST NEWS

    ಮಂಗಳೂರು ಮಹಾನಗರ ಪಾಲಿಕೆ ಕಾರ್ಪೋರೇಟರ್ ಗೂ ಕೊರೋನಾ

    ಮಂಗಳೂರು ಜುಲೈ 08: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಈಗ ಸಮುದಾಯ ಹಂತಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಹಲವಾರು ಜನಪ್ರತಿನಿಧಿಗಳಿಗೂ ಈಗ ಕೊರೊನಾ ಸೊಂಕು ತಗುಲಿದೆ. ಇತ್ತೀಚೆಗೆ ಶಾಸಕ ಭರತ್ ಶೆಟ್ಟಿಗೆ ಕೊರೊನಾ ಸೊಂಕು ತಗುಲಿರುವ ನಡುವೆ ಮಂಗಳೂರು ಪಾಲಿಕೆ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡ್ ಸದಸ್ಯೆ ಸುಮಂಗಲಾ ರಾವ್ ಅವರಿಗೆ ಕೊರೊನಾ ಸೊಂಕು ತಗುಲಿದೆ.


    ಈ ಕುರಿತಂತೆ ಸಾಮಾಜಿಕ ತಾಣದಲ್ಲಿ ಕಾರ್ಪೋರೇಟರ್ ಸುಮಂಗಲಾ ರಾವ್ ಸ್ವತಃ ಮಾಹಿತಿ ನೀಡಿದ್ದಾರೆ.  ಪಾಲಿಕೆ ಸದಸ್ಯೆ ಕೆಲ ದಿನಗಳ ಹಿಂದೆ ಕುಂಜತ್ತಬೈಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದು, ಈ ಸಭೆಯಲ್ಲಿ ಭಾಗವಹಿಸಿದ ಒಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರು ತಾವೇ ಕ್ವಾರೆಂಟೈನ್ ಗೆ ಒಳಗಾಗಿದ್ದರು. ಆದರೆ ಇಂದು ಬಂದ ವರದಿಯಲ್ಲಿ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply