LATEST NEWS
ಮಹಾನಗರಪಾಲಿಕೆಗೆ ಮುಖಭಂಗ.. ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಪ್ರಾರಂಭ
ಮಂಗಳೂರು ಅಗಸ್ಟ್ 13: ಲಾಕ್ ಡೌನ್ ಸಂದರ್ಭ ಕೊರೊನಾ ವಿಚಾರವನ್ನು ಮುಂದಿಟ್ಟುಕೊಂಡು ಏಕಾಎಕಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳನ್ನು ತೆರವುಗೊಳಿಸಿದ್ದ ಮಹಾನಗರಪಾಲಿಕೆಗೆ ಮುಖಭಂಗವಾಗಿದೆ. ಮಹಾನಗರಪಾಲಿಕೆಯ ಆಯುಕ್ತರೆ ತಾವು ಹಿಂದೆ ನೀಡಿ ತೆರವು ಆದೇಶವನ್ನು ವಾಪಾಸು ಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ತರಕಾರಿ, ಮೀನು ಹಾಗೂ ಇತರ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮಹಾನಗರ ಪಾಲಿಕೆಯ ಆಯುಕ್ತರು ಮಾರ್ಚ್ 7, 2020ರಂದು ತೆರವು ಗೊಳಿಸಲು ಆದೇಶ ನೀಡಿದ್ದರು, ಲಾಕ್ ಡೌನ್ ಹಾಗೂ ಕೊರೊನಾ ಭಯದಿಂದ ಬಹುತೇಕ ವರ್ತಕರು ಅಂಗಡಿ ಖಾಲಿ ಮಾಡಿದ್ದರು. ಆದರೆ ಪರ್ಯಾಯ ಸ್ಥಳ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿತ್ತು. ಈ ಹಿನ್ನಲೆ >ಮಂಗಳೂರು ಸೆಂಟ್ರಲ್ ಮಾರ್ಕೆಟ್ ವ್ಯಾಪಾರಿಗಳನ್ನು ಹಾಲಿ ಕಟ್ಟಡದಿಂದ ತೆರವುಗೊಳಿಸಲು ಏಕಾಏಕಿ ಮಹಾನಗರ ಪಾಲಿಕೆಯ ವತಿಯಿಂದ ಮಾಡಲಾದ ಆದೇಶದ ವಿರುದ್ಧ ಸೆಂಟ್ರಲ್ ಮಾರ್ಕೆಟ್ ನ ಸುಮಾರು 37 ವ್ಯಾಪಾರಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಬಗ್ಗೆ ರಾಜ್ಯದ ಹೈಕೋರ್ಟ್ ನಲ್ಲಿ ಕಾನೂನು ಸಮರ ನಡೆಯುತ್ತಿತ್ತು. ವ್ಯಾಪಾರಸ್ಥರು ಮನಪಾ ಆದೇಶಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದರು. ಅಂಗಡಿ ತೆರವುಗೊಳಿಸಲು ಮನಪಾ ವತಿಯಿಂದ ಸಲ್ಲಿಸಲಾದ ಅರ್ಜಿಗಳಿಗೂ ನ್ಯಾಯಾಲಯ ಸಮ್ಮತಿ ನೀಡಿರಲಿಲ್ಲ. ಈ ಪ್ರಕರಣದಲ್ಲಿ ನ್ಯಾಯಸಮ್ಮತವಾಗಿ ಕಾನೂನು ಪಾಲನೆ ಮಾಡುವಂತೆ ಮುಖ್ಯ ನ್ಯಾಯಾಧೀಶರ ಆದೇಶ ಹಿನ್ನೆಲೆಯಲ್ಲಿ ಮನಪಾ ಆಯುಕ್ತರು ವ್ಯಾಪಾರಸ್ಥರಿಗೆ ನೀಡಿದ್ದ ಆದೇಶವನ್ನು ಹಿಂದಕ್ಕೆ ಪಡೆದಿದ್ದಾರೆ.
ಪೊಲೀಸ್ ಬಲದೊಂದಿಗೆ ಮಾರ್ಕೇಟ್ ತೆರವುಗೊಳಿಸಿಯೇ ಸಿದ್ದ ಎಂದು ಕೂಗಾಡಿದ ಮಹಾನಗರಪಾಲಿಕೆಯ ಅಧಿಕಾರಿಗಳು ಈಗ ಉಲ್ಟಾ ಹೊಡೆದಿದ್ದಾರೆ.
ಇದರಿಂದ ಕಾನೂನು ಹೋರಾಟದಲ್ಲಿ ಮನಪಾಕ್ಕೆ ಹಿನ್ನಡೆಯಾಗಿದ್ದು, ಸೆಂಟ್ರಲ್ ಮಾರ್ಕೆಟ್ ನ ವ್ಯಾಪಾರಸ್ಥರಿಗೆ ಮತ್ತೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡಲು ಇದ್ದ ಅಡಚಣೆ ದೂರವಾಗಿದೆ.
Facebook Comments
You may like
-
ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಮೇಲೆ ಹಲ್ಲೆ – ಮಾಯಾ ಗ್ಯಾಂಗ್ ನ ಸದಸ್ಯರ ಆರೆಸ್ಟ್
-
20 ರೂ ನೀರಿನ ಬಾಟಲ್ ಗಾಗಿ ಬರೋಬ್ಬರಿ 5 ವರ್ಷದ ಹೋರಾಟ, ಸಿಕ್ಕಿದ ಪರಿಹಾರವೇಷ್ಟು ಗೋತ್ತಾ?
-
ಅನುಮತಿ ಇಲ್ಲದೆ ಡ್ರೋನ್ ಬಳಸಿದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತರ ಎಚ್ಚರಿಕೆ
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಮಂಗಳೂರು ಬಸ್ ನಲ್ಲಿ ಲೈಂಗಿಕ ಕಿರುಕುಳ: ಯುವತಿ ಮಾಡಿದ ಪೋಸ್ಟ್ ವೈರಲ್
You must be logged in to post a comment Login