BANTWAL
ಮೆಲ್ಕಾರ್ ಜಂಕ್ಷನ್ ಲಾರಿ- ಬೈಕ್ ಅಪಘಾತ ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವು
ಬಂಟ್ವಾಳ ನವೆಂಬರ್ 17: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಮೃತನನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು, ಇವನು ಮೆಲ್ಕಾರ್ ಜಂಕ್ಷನ್ ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.
ಘಟನೆಯ ಸಂದರ್ಭದಲ್ಲಿ ಲಾರಿ ಚಾಲಕ ಅಪಘಾತದಲ್ಲಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಮೆಲ್ಕಾರ್ ನಲ್ಲಿದ್ದ ಸರ್ಕಲ್ ಹುಡಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login