BANTWAL
ಉದ್ಯೋಗ ಸಿಗದೆ ಮಾನಸಿಕ ಖಿನ್ನತೆ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ರಕ್ಷಣೆ..!
ಬಂಟ್ವಾಳ : ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ನಡೆದಿದೆ.
ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿರುವ ಆತ ಸೂಕ್ತ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸೋಮವಾರ ದ್ವಿಚಕ್ರದಲ್ಲಿ ಬಂದಾತ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಸ್ಥಳೀಯ ನಿವಾಸಿಗಳು ಗಮನಿಸಿ ಅವನನ್ನು ರಕ್ಷಣೆ ಮಾಡಿ ಆತ್ಮಹತ್ಯೆ ಯತ್ನದಿಂದ ಪಾರು ಮಾಡಿದ್ದಾರೆ. ಸ್ಥಳೀಯ ನಿವಾಸಿಗಳಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿದ್ದತಿಂದ ನಿಶ್ಚಿತ್ ನ ಜೀವ ಉಳಿದಿದೆ. ಪ್ರಸ್ತುತ ನಿಶ್ಚಿತ್ನನ್ನು ಪೊಲೀಸರಿಗೊಪ್ಪಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
You must be logged in to post a comment Login