Connect with us

DAKSHINA KANNADA

ಸುಬ್ರಹ್ಮಣ್ಯ – ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಸಾವು

ಸುಬ್ರಹ್ಮಣ್ಯ ಜನವರಿ 05: ವಿದ್ಯುತ್ ಕಂಬ ಹತ್ತಿ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ಗೆ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ.


ಮೃತರನ್ನು ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಎಂದು ಗುರುತಿಸಲಾಗಿದೆ. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *