LATEST NEWS
ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ – ಈಶ್ವರಪ್ಪ
ಬೆಂಗಳೂರು ಮಾರ್ಚ್ 31: ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗಂಡಸ್ತನ ಹೇಳಿಕೆ ಇದೀಗ ವಿವಾದ ಸೃಷ್ಠಿಸಿದ್ದು, ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ ಬಳಸಬೇಕೋ, ಮೂರು ಕಡೆ ಬಳಸಬೇಕೋ ಎಂಬುದು ಅವರು ತಿಳಿದುಕೊಂಡಿದ್ದಾರೆ ಎಂದು ಸಚಿವ ಈಶ್ವರಪ್ಪ ಕುಮಾರಸ್ವಾಮಿಯವರಿಗೆ ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾದಂತವರು, ಮತ್ತೊಬ್ಬ ಮುಖ್ಯಮಂತ್ರಿಯ ಗಂಡಸ್ತನ ಬಗ್ಗೆ ಪ್ರಶ್ನೆ ಮಾಡೋದು ಸರಿಯಲ್ಲ. ಅವರು ಒಬ್ರು ಹಿರಿಯ ರಾಜಕಾರಣಿ. ಗಂಡಸ್ತನ ಮಾಡುವ ಅವರ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು.
You must be logged in to post a comment Login