Connect with us

    BANTWAL

    ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

    ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

    ಮಂಗಳೂರು ಮೇ 11: ಸಚಿವ ರಮಾನಾಥ ರೈ ಆಪ್ತ ಕಾಂಗ್ರೆಸ್ ಮುಖಂಡನೋರ್ವನ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

    ದಕ್ಷಿಣ ಕನ್ನಡ  ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಸಚಿವ ರಮಾನಾಥ್ ರೈ‌ ಆಪ್ತ ಹಾಗು ಬಂಟ್ವಾಳ ತಾಲೂಕು ಪಂಚಾಯತ್ ನ ಸದಸ್ಯರಾಗಿರುವ ಸಂಜೀವ ಪೂಜಾರಿ ಯ ಮನೆ ಮೇಲೆ ಕಳೆದ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ  ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಮನೆಯ ಸಾಮಾಗ್ರಿಗಳು ಮತ್ತು ಕಾರನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಡೆಯಲು ಬಂದ ಇತರ  ಮೂವರ ಮೇಲೆ ಹಲ್ಲೆ ನಡೆಸಿದ್ದು ಘಟನೆಯಲ್ಲಿ ಗಾಯಗೊಂಡವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವನ್ನು ಪಡೆದಿದ್ದು, ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಬಾರ್ ಹೊಂದಿದ್ದು ಅಕ್ರಮ ಮದ್ಯ ಸರಬರಾಜು ನಡೆಸಿದನ್ನು ನಿನ್ನೆ ಸಂಜೆಯ ವೇಳೆಯಷ್ಟೇ ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದರು. ಇದೇ ಹಲ್ಲೆಗೆ ಕಾರಣ ಎಂದು ಹೇಳಲಾಗುತ್ತಿದೆ.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply