DAKSHINA KANNADA
ಮೇಕೆದಾಟು ವಿಚಾರದಲ್ಲಿ ಕಾಂಗ್ರೇಸ್ ಪಾದಯಾತ್ರೆ ಹಾಸ್ಯಾಸ್ಪದ – ಸಚಿವ ಸುನಿಲ್ ಕುಮಾರ್
ಪುತ್ತೂರು ಜನವರಿ 03: ಮೇಕೆದಾಟು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಮ್ಮಿಕೊಂಡಿರುವ ಪಾದಯಾತ್ರೆ ಹಾಸ್ಯಾಸ್ಪದ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಕೇವಲ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದೆ. ತಮಿಳುನಾಡಿ ವಿರೋಧಿಸಿದ ಸಂದರ್ಭದಲ್ಲಿ ರಾಜ್ಯದ ಸ್ಪಷ್ಟ ನಿಲುವನ್ನು ತಿಳಿಸುವಲ್ಲಿ ಕೂಡ ವಿಫಲವಾಗಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರ,ರೈತರ ನೀರಾವರಿ ಸಮಸ್ಯೆಯ ಬಗ್ಗೆ ಕಾಳಜಿಯಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಹೇಳಿದ ಅವರು ಕಾಂಗ್ರೇಸ್ ಗೆ ರಾಜ್ಯದ ಹಿತಾಸಕ್ತಿಯೂ ಇಲ್ಲ, ಜನರ ಹಿತಾಸಕ್ತಿಯೂ ಇಲ್ಲ, ಕೇವಲ ಸ್ವ ಹಿತಾಸಕ್ತಿ ಮಾತ್ರ ಇದೆ .
ಬಿಜೆಪಿ ಸರಕಾರ ಮೇಕೆದಾಟು ಯೋಜನೆಯ ಜಾರಿಗೆ ಬದ್ಧವಾಗಿದೆ. ಯೋಜನೆ ಜಾರಿಗೊಳಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ನೀರಾವರಿ ಪೂರೈಸಲಾಗುವುದು ಎಂದರು.
You must be logged in to post a comment Login