Connect with us

KARNATAKA

ಬಿಜೆಪಿಯವರು ಮಾಡೋದಲ್ಲ ವ್ಯರ್ಥ ಕಸರತ್ತು – ಯು.ಟಿ ಖಾದರ್

ಬಿಜೆಪಿಯವರು ಮಾಡೋದಲ್ಲ ವ್ಯರ್ಥ ಕಸರತ್ತು – ಯು.ಟಿ ಖಾದರ್

ಮಂಗಳೂರು ಜನವರಿ 16: ಬಿಬಿಎಂಪಿಯಲ್ಲಿ ಇರೋ ನಾಲ್ಕು ಸದಸ್ಯರನ್ನು ಹಿಡಿಯಲಾಗದ ಬಿಜೆಪಿಯವರು ಇನ್ನು 15 ಶಾಸಕರನ್ನು ಹಿಡಿಯೋಕಾಗುತ್ತಾ, ಅವರದ್ದೆಲ್ಲ ಟೆಸ್ಟ್ ಮ್ಯಾಚ್ ಆದರೆ ನಾವು ಒನ್ ಡೇ ಮ್ಯಾಚ್ ಆಡಿ ಒಂದೇ ದಿನದಲ್ಲಿ ಕೆಲಸ ಮುಗಿಸುತ್ತೇವೆ ಎಂದು ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯವರು ಮಾಡೋದೆಲ್ಲ ವ್ಯರ್ಥ ಕಸರತ್ತು. ಮುಂದಿನ ಚುನಾವಣೆಯಲ್ಲಿ ಸಮ್ಮಿಶ್ರ ಸರಕಾರಕ್ಕೆ ಬಹುಮತ ಬರುತ್ತದೆ ಎಂದು ಗೊತ್ತಾಗಿ ಬಿಜೆಪಿ ಅವರು ಗೊಂದಲ ಮಾಡುತ್ತಿದ್ದಾರೆ ಎಂದರು.

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಪಕ್ಷಕ್ಕೆ ತೊಂದರೆಯಾಗುವ ಯಾವುದೇ ಕೆಲಸವನ್ನು ಅವರು ಮಾಡುವುದಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ. ಮುಂದೆ ಕೂಡ ಚೆನ್ನಾಗಿ ನಡೆಯುತ್ತದೆ. ಬಿಜೆಪಿ ಅವರು ವಿರೋಧ ಪಕ್ಷದಲ್ಲಿದ್ದು ಸಮಾಜಕ್ಕೆ ಒಳ್ಳೆಯದನ್ನ ಮಾಡಲು ಸಲಹೆ ಸೂಚನೆ ಕೊಡುವುದನ್ನು ಬಿಟ್ಟು ಈ ರೀತಿ ಕೆಲಸ ಮಾಡುವುದು ತಪ್ಪು ಎಂದು ಕಿಡಿಕಾರಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *