LATEST NEWS
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಸಚಿವ ಸುನೀಲ್ ಭೇಟಿ
ಮಂಗಳೂರು: ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು. ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಮಾರ್ಚ್ 6ರಂದು ಸಿಎಂ ಗರಡಿಗೆ:
ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು.
You must be logged in to post a comment Login