Connect with us

    DAKSHINA KANNADA

    ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ; ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಧರ್ಮದೇಟು

    ಮಂಗಳೂರು ಜುಲೈ 14 :  ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್‌ ಗೆ  ಮಹಿಳೆಯರು ಗೂಸಾ ನೀಡಿ  ತದಕಿದ್ದಾರೆ.

    ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಉಸ್ತಾದ್  ಪ್ರಯಾಣ ಮಾಡುತ್ತಿದ್ದ. ಈ ವೇಳೆ  ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ್ದಾನೆ . ಮೈ ಕೈಗೆಲ್ಲ ಕೈ ಹಾಕಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾರಂಭಿದ್ದಾನೆ. ಇದನ್ನು ಪಕ್ದಲ್ಲಿದ್ದ ಸಹ ಪ್ರಯಾಣಿಕರು ಗಮನಿಸಿ ಬಾಲಕಿಯ ತಾಯಿಗೆ ಹೇಳಿದ್ದಾರೆ.

     

    ಇದರಿಂದ  ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಉಸ್ತಾದ್‌ ಗೆ ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ತನ್ನನ್ನು ಬಿಟ್ಟು ಬಿಡುವಂತೆ ಪರಿಪರಿಯಾಗಿ ಬೇಡುತ್ತಿರುವ ದೃಶ್ಯ ಮತ್ತು ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್​ವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply