Connect with us

KARNATAKA

ಚಿಕ್ಕಮಗಳೂರು – ತಾಯಿ ಇಲ್ಲದ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ಕಾಮುಕರಿಂದ ಅತ್ಯಾಚಾರ

ಚಿಕ್ಕಮಗಳೂರು: ತಾಯಿ ಕಳೆದುಕೊಂಡ 15ರ ಅಪ್ರಾಪ್ತ ಬಾಲಕಿ ಮೇಲೆ 30ಕ್ಕಬ ಅಧಿಕ ಮಂದಿ ನಾಲ್ಕೈದು ತಿಂಗಳಿನಿಂದ ಸಾಮೂಹಿಕ ಅತ್ಯಾತಾರ ನಡೆಸಿರುವ ಭೀಕರ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.


ಇಡೀ ದೇಶವೇ ಬೆಚ್ಚಿಬೀಳುವ ದುಷ್ಕೃತ್ಯ ಕರ್ನಾಟಕದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿದ್ದ 15ರ ಬಾಲೆ ಮೇಲೆ 30ಕ್ಕೂ ಹೆಚ್ಚು ಮಂದಿ ನಾಲ್ಕೈದು ತಿಂಗಳಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದು, 15ಕ್ಕೂ ಅಧಿಕ ಆರೋಪಿಗಳ ಗುರುತೇ ಆಕೆಗಿಲ್ಲ.

ಸೆಪ್ಟೆಂಬರ್ 2020ರಿಂದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ ಮಾಡಲಾಗಿದೆ. ಬಾಲಕಿಯನ್ನು ಅತ್ಯಾಚಾರ ಮಾಡಿ, ವಿಡಿಯೋ ಮಾಡಿಟ್ಟುಕೊಂಡಿದ್ದ ವ್ಯಕ್ತಿ, ಬಾಲಕಿಗೆ ಅತ್ಯಾಚಾರದ ವಿಡಿಯೋ ತೋರಿಸಿ, ಬ್ಲಾಕ್ ಮೇಲ್ ಮಾಡಿ, ನಿರಂತರವಾಗಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.


ಶೃಂಗೇರಿಯಲ್ಲಿ ವಾಸವಿದ್ದ ಶಿಗ್ಗಾವಿ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಗೋಚವಳ್ಳಿ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶೃಂಗೇರಿ ಪೊಲೀಸ್​ ಠಾಣೆಯಲ್ಲಿ ನಿನ್ನೆ ಎಫ್​ಐಆರ್​ ದಾಖಲಾಗಿದೆ. 15 ವರ್ಷದ ಬಾಲಕಿ ಮೇಲೆ ಕಿಕ್ರೆ ಸ್ಮಾಲ್​ ಅಭಿ ಮತ್ತು ಆತನ ಸ್ನೇಹಿತರು ಸೇರಿ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿ ಲೈಂಕಿಗ ದೌರ್ಜನ್ಯವೆಸಗಿದ್ದಾರೆ. ಈ ದುಷ್ಕೃತ್ಯಕ್ಕೆ ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ಗೀತಾಳ ಸಹಕಾರವೂ ಇದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ನೀಚ ತನ್ನ ಸ್ನೇಹಿತರು, ಪರಿಚಿತರಿಂದಲೂ ಬಾಲಕಿಯ ಮೇಲೆ ಅತ್ಯಾಚಾರವೆಸಗುತ್ತಿದ್ದನಂತೆ. ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದಳು. ಸದ್ಯ ಚಿಕ್ಕಮ್ಮ ಸೇರಿದಂತೆ ಹದಿನಾಲ್ಕು ಮಂದಿ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಈಗಾಗಲೇ ಬಾಲಕಿಯ ಚಿಕ್ಕಮ್ಮ ಸೇರಿದಂತೆ ಎಂಟು ಮಂದಿಯ ಬಂಧನವಾಗಿದೆ. ಚಿಕ್ಕಮಗಳೂರಿನ ಸಾಂತ್ವಾನ ಕೇಂದ್ರದಲ್ಲಿ ಬಾಲಕಿ ಆಶ್ರಯ ಪಡೆದಿದ್ದಾಳೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *