Connect with us

    BANTWAL

    ಬಂಟ್ವಾಳ – ಮನೆಂಗಳಕ್ಕೆ ನುಗ್ಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ.


    ಈ ಘಟನೆ ಬಗ್ಗೆ ಮನೆಗೆ ಸಂಬಂಧಿಸಿದ ಎಂ ಚಂದ್ರ ಶೆಟ್ಟಿ (64) ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹೆಂಡತಿಗೆ ಸಂಬಂದಿಸಿದ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿರುವ ಮನೆಗೆ ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಬಿ ಮೂಡ ನಿವಾಸಿ, ಆರೋಪಿ ಸುಮಿತ್ ಆಳ್ವ (45) ಎಂಬಾತ ತನ್ನ 4 ಮಂದಿ ಸಹಚರರ ಜೊತೆ ಸೇರಿ ಮಹೇಂದ್ರ ಎಕ್ಸ್ ಯು ವಿ 500 ವಾಹನದಲ್ಲಿ ಬಂದು, ಮನೆಯ ಎದುರುಗಡೆ ಅಳವಡಿಸಿದ ಕಬ್ಬಿಣ ಗೇಟ್ ಮುರಿದು ಮನೆಯಂಗಳಕ್ಕೆ ಬಂದು ಮನೆಯ ಮುಂಭಾಗಕ್ಕೆ ಪೆಟ್ರೋಲ್ ಎರಚಿ ಬೆಂಕಿ ಹೆಚ್ಚಿರುತ್ತಾರೆ. ಪರಿಣಾಮ ಮನೆಯ ಮುಂಬಾಗಿಲು ಸುಟ್ಟು ಹೋಗಿದ್ದು, ಹೊರಾಂಗಣದಲ್ಲಿದ್ದ ಕುರ್ಚಿ ಸಂಪೂರ್ಣ ಸುಟ್ಟು ಹೋಗಿರುತ್ತದೆ.

    ಘಟನೆಯ ಬಗ್ಗೆ ಇದೇ ಮನೆಯಲ್ಲಿ ಬಾಡಿಗೆ ವಾಸವಿರುವ ಪ್ರದೀಪ ಹಾಗೂ ಮನ್ಸೂರ್ ಎಂಬವರು ಮನೆಯ ಒಳಗಿನಿಂದ ಗಮನಿಸಿ, ಬೊಬ್ಬೆ ಹೊಡೆದು, ಚಂದ್ರ ಶೆಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದಂತೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮ 143/2023 147, 448, 427, 436, 511 307 0 143, 3 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply