BANTWAL
ಬಂಟ್ವಾಳ – ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

ಬಂಟ್ವಾಳ ಮೇ 16: ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಸ್ಥಳೀಯ ನಿವಾಸಿ ಹಮೀದ್ ಯಾನೆ ಅಮ್ಮಿ ಎಂದು ತಿಳಿದುಬಂದಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
