DAKSHINA KANNADA
ಸರಕಾರಿ ಲೆಟರ್ ಹೆಡ್ ದುರುಪಯೋಗ – ಸಿಬ್ಬಂದಿ ಮೇಲೆ ತಾಲೂಕು ಕಾರ್ಯನಿರ್ವಹಣಾಧಿಕಾರಿಯಿಂದ ಪೋಲೀಸರಿಗೆ ದೂರು
ಪುತ್ತೂರು : ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸರಕಾರಿ ಅಧಿಕಾರಿಯೊಬ್ಬರು ದೂರು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕು ಕಾರ್ಯನಿರ್ವಹಣಾಧಿಕಾರಿಯಾಗಿರುವ ನವೀನ್ ಭಂಡಾರಿ ಎಂಬವರು ಸಿಬ್ಬಂದಿ ಶಿವಾನಂದ ಎಂಬವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ವೈಯುಕ್ತಿಕ ಮತ್ತು ಸ್ವಹಿತಾಸಕ್ತಿಗಾಗಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.
ಪ್ರಕಣದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಾಲೂಕು ಪಂಚಾಯತ್ ದಾಖಲೆ ಪತ್ರಗಳ ವಂಚನೆ ಮಾಡಿರುವ ಬಗ್ಗೆಯೂ ಕಾರ್ಯನಿರ್ವಹಣಾಧಿಕಾರಿ ಸಿಬಂದಿ ವಿರುದ್ದ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ದೂರನ್ನು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
You must be logged in to post a comment Login