Connect with us

    LATEST NEWS

    ಬಸ್ ನಲ್ಲಿ ಯುವತಿಗೆ ಕಿರುಕುಳ – ದೂರು ದಾಖಲು

    ಮಂಗಳೂರು ಜೂನ್ 08 : ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸ್ಟೇಟ್‌ ಬ್ಯಾಂಕ್‌ ಬಳಿ ನಡೆದಿದ್ದು, ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಕಂಪೆನಿಯೊಂದರ ಪ್ರಾಡಕ್ಟ್ ಸೇಲ್‌ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕಚೇರಿಗೆ ಹೋಗಿ ಪ್ರಾಡಕ್ಟ್ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್‌ನಲ್ಲಿ ಬೆಳಗ್ಗೆ 9 ಗಂಟೆಗೆ ಸ್ಟೇಟ್‌ ಬ್ಯಾಂಕ್‌ಗೆ ಬಂದಿದ್ದರು. ಸ್ಟೇಟ್‌ ಬ್ಯಾಂಕ್‌ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‌ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಸುಮಾರು 27ರಿಂದ 28 ವರ್ಷ ವಯಸ್ಸಿನ ಯುವಕ ಆಕೆಯ ಹಿಂಬದಿಯ ಸೀಟಿನಲ್ಲಿ ಕುಳಿತು ಮಾನಭಂಗ ಮಾಡುವ ಉದ್ದೇಶದಿಂದ ಸೊಂಟಕ್ಕೆ ಕೈ ಹಾಕಿ ಎಳೆದಿದ್ದಾನೆ ಎಂದು ದೂರು ದಾಖಲಾಗಿದೆ.

    ಯುವತಿಯು ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿ ಕಲಂದರ್ ಶಾಫಿ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354(ಡಿ)ರಂತೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ದಸ್ತಗಿರಿ ಕ್ರಮ ಜರುಗಿಸಿ, ಆತನನ್ನು ವಿಚಾರಿಸಿದಾಗ ಈ ಕೃತ್ಯ ನಡೆದ ಸಮಯದಲ್ಲಿ ತನಗೆ ಸಾರ್ವಜನಿಕರಿಂದ ಹಲ್ಲೆಯಾದ ಬಗ್ಗೆ ಆರೋಪಿಸಿರುವುದಿಲ್ಲ. ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಿ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದು, ಪ್ರಸ್ತುತ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ

    Share Information
    Advertisement
    Click to comment

    You must be logged in to post a comment Login

    Leave a Reply